10:40 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್ ಅಹಮದ್ ಪತ್ರ

14/08/2026, 22:01

ಬೆಂಗಳೂರು(reporterkarnataka.com): ಸಚಿವ ಜಮೀರ್​​ ಅಹ್ಮದ್​ ಖಾನ್​ ಅವರು ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮಗೆ ನೀಡಲಾಗಿರುವ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಸಿಎಂ ಡಿಕೆ ಶಿವಕುಮಾರ್​ ಅವರಿಗೆ ಪತ್ರ ಬರೆದಿದ್ದಾರೆ.ಜಮೀರ್ ಅವರು ಬರೆದಿರುವ ಪತ್ರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

*ಜಮೀರ್​ ಅವರು ಬರೆದ ಪತ್ರದಲ್ಲಿ ಏನಿದೆ?*
ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜಿಬಿಎ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್​ಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು