11:32 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು | ಅತ್ತಾವರ ಕಟ್ಟೆಯಲ್ಲಿ ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

15/08/2026, 23:32

ಮಂಗಳೂರು(reporterkarnataka.com):ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಬಿಜೈ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ಲಯನ್ಸ್ ಪ್ರೀತಿ ಡಿ’ಸೋಜಾ ಮಾತನಾಡಿ, “ಸ್ವಾತಂತ್ರ್ಯದ 80 ವರ್ಷಗಳಲ್ಲಿ ಭಾರತವು ಹಲವಾರು ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ನಮ್ಮ ದೇಶ ಗಡಿಗಳಲ್ಲಿ ಮಾತ್ರ ಭದ್ರವಾಗಿದ್ದರೆ ಸಾಲದು; ದೇಶದ ಒಳಗೂ ಒಗ್ಗಟ್ಟು ಮತ್ತು ಏಕತೆಯ ಶಕ್ತಿಯನ್ನು ಪ್ರದರ್ಶಿಸಬೇಕು” ಎಂದು ಹೇಳಿದರು.
ಸದ್ಭಾವನಾ ವೇದಿಕೆಯ ಅಧ್ಯಕ್ಷ ದಿವಾನ್ ಕೇಶವ ಭಟ್ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ, “ನಾವೆಲ್ಲರೂ ಒಂದಾಗಿ, ಜಾತಿ-ಮತ ಭೇದವಿಲ್ಲದ ಸುಂದರ ಹಾಗೂ ಸೌಹಾರ್ದಯುತ ಭಾರತವನ್ನು ನಿರ್ಮಿಸೋಣ” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸದ್ಭಾವನಾ ವೇದಿಕೆ ಹಾಗೂ ಬಿಜೈ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಮತ್ತು ವಿವಿಧ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು