ಇತ್ತೀಚಿನ ಸುದ್ದಿ
ಮೂಡಿಗೆರೆ | 3,000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಹುಚ್ಚಾಟ: ರೀಲ್ಸ್ ಪ್ರೇಮಿಗಳಿಗೆ ಅರಣ್ಯ ಇಲಾಖೆ ಬಿಗ್ ಶಾಕ್
20/08/2026, 18:54
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವ ಹುಚ್ಚಿನಲ್ಲಿ ಪ್ರವಾಸಿಗರು ತಮ್ಮ ಪ್ರಾಣದ ಜೊತೆ ಚೆಲ್ಲಾಟವಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ‘ರಾಣಿ ಝರಿ ಪ್ರವಾಸಿ ತಾಣದಲ್ಲಿ ನಡೆದಿದೆ. ನಿಷೇಧಿತ ಪ್ರದೇಶದಲ್ಲೂ ಥಾರ್ ಜೀಪ್ ಸಾಹಸ ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿ ಝರಿ ವ್ಯೂ ಪಾಯಿಂಟ್ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದಾಗ್ಯೂ, ಬೆಂಗಳೂರು ಮೂಲದ ಪ್ರವಾಸಿಗರು ನಿಯಮ ಮೀರಿ ಸುಮಾರು 3,000 ಅಡಿ ಆಳದ ಪ್ರಪಾತದ ತುದಿಯಲ್ಲೇ ಥಾರ್ ಜೀಪ್ ಓಡಿಸಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಚಿತ್ರೀಕರಿಸಿದ್ದಾರೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೂ ಭಾರಿ ದುರಂತ ಸಂಭವಿಸುವ ಸಾಧ್ಯತೆಯಿತ್ತು. ವಾಹನ ವಶಕ್ಕೆ, ಪ್ರಕರಣ ದಾಖಲು
ಪ್ರವಾಸಿಗರ ಈ ಅಪಾಯಕಾರಿ ಹುಚ್ಚಾಟದ ವಿಷಯ ತಿಳಿಯುತ್ತಿದ್ದಂತೆಯೇ ಕಳಸ ಅರಣ್ಯ ವಲಯದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಥಾರ್ ಜೀಪ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರವಾಸಿಗರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.













