ಇತ್ತೀಚಿನ ಸುದ್ದಿ
ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ
21/08/2026, 00:28
ಮಂಗಳೂರು(reporterkarnataka.com):ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಆಗಸ್ಟ್ 18ರಂದು ಮದ್ಯ ರಾತ್ರಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದ ಮಾಡಿನ ಮೇಲೆ ಹಾಕಿರುವ ಜಾಲರಿ ಮೂಲಕ ಒಳಪ್ರವೇಶಿಸಿ ಸಿ ಟಿ ವಿ ಕ್ಯಾಮರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಕಳ್ಳತನ ಮಾಡಿದ ಆರೋಪಿಯಾದ ಮಡಿಕೇರಿ ಸಣ್ಣಪುಲಿಕೊಟ್ಟ ಗ್ರಾಮದ ರವಿಕುಮಾರ @ರವಿ ಹೆಚ್ ಜಿ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಯಿಂದ ಸುಮಾರು ಕಳ್ಳತನದ 2195/- ರೂ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.












