ಇತ್ತೀಚಿನ ಸುದ್ದಿ
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು ಮಂದಾರಬೈಲಿನಲ್ಲಿ ಕೋಲ ಸೇವೆ
24/08/2026, 11:01
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಸಂಕಷ್ಟದಿಂದ ಪಾರಾಗಲು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ.


ದರ್ಶನ್ ವಿರುದ್ಧ ಅವರ ಆಪ್ತ ಪ್ರದೋಷ್ ಮಾಫಿ ಸಾಕ್ಷಿಯಾಗುವ ಸಾಧ್ಯತೆಗಳ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ತುಳುನಾಡಿನ ಕಾರಣಿಕ ದೈವವಾದ ದೇರೆಬೈಲ್ ಕೊಂಚಾಡಿ ಸಮೀಪದ
ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪತಿ ದರ್ಶನ್ ಅವರು ಕಾನೂನು ರೀತಿಯ ಎಲ್ಲ ಸಂಕಷ್ಟಗಳಿಂದ ಪಾರು ಮಾಡುವಂತೆ ಪ್ರಾರ್ಥಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಜಯಲಕ್ಷ್ಮಿ ಅವರು ಮಂದಾರಬೈಲಿನ ದೈವಗಳಿಗೆ ಕೋಲ ಸೇವೆ ನಡೆಸಿ ದೈವಾನುಗ್ರಹ ಕೋರಿದ್ದಾರೆ. ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸುವುದರ ಜೊತೆಗೆ ಪತಿಯ ಮೇಲಿರುವ ಸಂಕಷ್ಟಗಳು ದೂರವಾಗಲೆಂದು ಹರಕೆ ಸೇವೆ ಮಾಡಿದ್ದಾರೆ.












