10:14 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ

22/09/2021, 19:07

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. 

ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಬಂದ್ ಕರೆ ಯಶಸ್ವಿಗೊಳಿಸಲು ವಿವಿಧ ಸಂಘಟನೆಗಳ ಪದಾಧಿಕಾರಿಗಳು  ಪ್ರವಾಸಿ ಮಂದಿರದಲ್ಲಿ. ಸೆ22ರಂದು ಪೂರ್ವಭಾವಿ ಸಭೆ ಜರುಗಿಸಲಾಯಿತು,

ಸಭೆಯಲ್ಲಿ ಕನ್ನಡಪರ ಸಂಘಟನೆ ಹಾಗೂ ವಿವಿದ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಮೂಲಕ
ಬಂದ್ ಯಶಸ್ಸುಗೊಳಿಸಲು ಸರ್ವರು ಒಮ್ಮತದ ನಿರ್ಣಯ ಕೈಗೊಂಡರು,

ಸಾರ್ವಜನಿಕರಲ್ಲಿ ಮನವಿ: ರೈತ ಸಂಘದ ಮುಖಂಡರಾದ ಕೆ.ಕೆ. ಹಟ್ಟಿ ದೇವರಮನೆ ಮಹೇಶ್ ಮಾತನಾಡಿ, ಜನ ವಿರೋಧಿ ನೀತಿಯ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಜರುಗುತ್ತಿರುವ ಪ್ರತಿಭಟನೆಗೆ.ಬೆಂಬಲ ವ್ಯಕ್ತಪಡಿಸಿ ಕರೆ ನೀಡಿರುವ ಭಾರತ ಬಂದ್ ಕರೆ 

ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಕೂಡ್ಲಿಗಿ ಬಂದ್ ಗೆ

ಸಾರ್ವಜನಿಕರು ಸಹಕರಿಸಬೇಕು ಹಾಗೂ ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಮಾಲೀಕರು ವಾಹನಗಳ ಕಾರ್ಮಿಕರು, ಬಂದ್ ನಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು  ಅವರು ಮನವಿ ಮಾಡಿದರು.

ಎಂ. ಬಸವರಾಜ, ಕಾರ್ಮಿಕ ಮುಖಂಡ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ.ರೈತ ಸಂಘದ ಮುಖಂಡರಾದ ವಿ ನಾಗರಾಜ,ಎಸ್.ಭಾಷಾ ಸಾಬ್, ಕಾರ್ಯಾಧ್ಯಕ್ಷ ಕೆ.ಕೃಷ್ಣ,ಬಿ.ಚನ್ನಬಸಪ್ಪ ಹಾಗೂ ಹಾಲಸ್ವಾಮಿ ಮತ್ತು ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ದೇವದಾಸಿ ವಿಮೋಚನ ಸಂಘದ ಅಧ್ಯಕ್ಷೆ ಕೆ.ವೆಂಕಮ್ಮ,ರೈತ ಸಂಘದ ಕಾರ್ಯಕರ್ತರಾದ ಭಾಷಾಸಾಬ್ ಕೆ., ಶೇಷಪ್ಪ,ಉಲುವತ್ತಿ ಸೋಮಣ್ಣ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು