5:36 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ

22/09/2021, 19:07

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. 

ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಬಂದ್ ಕರೆ ಯಶಸ್ವಿಗೊಳಿಸಲು ವಿವಿಧ ಸಂಘಟನೆಗಳ ಪದಾಧಿಕಾರಿಗಳು  ಪ್ರವಾಸಿ ಮಂದಿರದಲ್ಲಿ. ಸೆ22ರಂದು ಪೂರ್ವಭಾವಿ ಸಭೆ ಜರುಗಿಸಲಾಯಿತು,

ಸಭೆಯಲ್ಲಿ ಕನ್ನಡಪರ ಸಂಘಟನೆ ಹಾಗೂ ವಿವಿದ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಮೂಲಕ
ಬಂದ್ ಯಶಸ್ಸುಗೊಳಿಸಲು ಸರ್ವರು ಒಮ್ಮತದ ನಿರ್ಣಯ ಕೈಗೊಂಡರು,

ಸಾರ್ವಜನಿಕರಲ್ಲಿ ಮನವಿ: ರೈತ ಸಂಘದ ಮುಖಂಡರಾದ ಕೆ.ಕೆ. ಹಟ್ಟಿ ದೇವರಮನೆ ಮಹೇಶ್ ಮಾತನಾಡಿ, ಜನ ವಿರೋಧಿ ನೀತಿಯ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಜರುಗುತ್ತಿರುವ ಪ್ರತಿಭಟನೆಗೆ.ಬೆಂಬಲ ವ್ಯಕ್ತಪಡಿಸಿ ಕರೆ ನೀಡಿರುವ ಭಾರತ ಬಂದ್ ಕರೆ 

ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಕೂಡ್ಲಿಗಿ ಬಂದ್ ಗೆ

ಸಾರ್ವಜನಿಕರು ಸಹಕರಿಸಬೇಕು ಹಾಗೂ ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಮಾಲೀಕರು ವಾಹನಗಳ ಕಾರ್ಮಿಕರು, ಬಂದ್ ನಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು  ಅವರು ಮನವಿ ಮಾಡಿದರು.

ಎಂ. ಬಸವರಾಜ, ಕಾರ್ಮಿಕ ಮುಖಂಡ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ.ರೈತ ಸಂಘದ ಮುಖಂಡರಾದ ವಿ ನಾಗರಾಜ,ಎಸ್.ಭಾಷಾ ಸಾಬ್, ಕಾರ್ಯಾಧ್ಯಕ್ಷ ಕೆ.ಕೃಷ್ಣ,ಬಿ.ಚನ್ನಬಸಪ್ಪ ಹಾಗೂ ಹಾಲಸ್ವಾಮಿ ಮತ್ತು ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ದೇವದಾಸಿ ವಿಮೋಚನ ಸಂಘದ ಅಧ್ಯಕ್ಷೆ ಕೆ.ವೆಂಕಮ್ಮ,ರೈತ ಸಂಘದ ಕಾರ್ಯಕರ್ತರಾದ ಭಾಷಾಸಾಬ್ ಕೆ., ಶೇಷಪ್ಪ,ಉಲುವತ್ತಿ ಸೋಮಣ್ಣ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು