3:15 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ !

22/09/2021, 20:38

ಅನುಷ್ ಪಂಡಿತ್ ಮಂಗಳೂರು
Info.reporterkarnataka@gmail.com

ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರಂಭಿಸಿದ್ದಾರೆ. ಇದಕ್ಕೆ ಕಾರಣ ಕೂಡ ಉಂಟು. ಹಾಗಾದರೆ ಇದೇನು 

ಅಂತಹ ಮಹಾ ಕಾರಣ ಎಂಬ ಕುತೂಹಲ ನಿಮಗಿದೆಯೇ? ಮುಂದಕ್ಕೆ ಓದಿ…

ಹಳೆಯ ಕ್ಲಾಕ್ ಟವರ್ ತೆರವುಗೊಳಿಸಿ ದಶಕಗಳೇ ಉರುಳಿದ ಬಳಿಕ ಅದೇ ಜಾಗದಲ್ಲಿ ಮತ್ತೆ ಕ್ಲಾಕ್ ಟವರ್ ನಿರ್ಮಿಸುವ ಬಗ್ಗೆ ಮಂಗಳೂರಿನ ನಾಗರಿಕರ ತಂಡವೊಂದು ವಿರೋಧ ವ್ಯಕ್ತಪಡಿಸಿತ್ತು. ಪಾಲಿಕೆಯಲ್ಲಿ ಅಂದು ಪ್ರತಿಪಕ್ಷದ ಸಾಲಿನಲ್ಲಿದ್ದ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಹಠಕ್ಕೆ ಬಿದ್ದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಥಮ ಕಾಮಗಾರಿಯಾಗಿ ಕ್ಲಾಕ್ ಟವರ್ ಕೈಗೆತ್ತಿಕೊಳ್ಳಲಾಯಿತು. ಇದೀಗ ಕ್ಲಾಕ್ ಟವರ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿದೆ. ಜನರಿಗೆ ಟೈಮ್ ನೋಡಲು ಈ ಗಡಿಯಾರ ಗೋಪುರ ಬೇಕಿಲ್ಲದಿದ್ದರೂ ಬೇರೆ ರೀತಿಯಲ್ಲಿ ಅದು ಇಂದು ಉಪಯೋಗಕ್ಕೆ ಬಂದಿದೆ. ಅದೇನೆಂದರೆ, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಕ್ಲಾಕ್ ಟವರ್ ನ ಕಾರಂಜಿ ನೀರಿನಲ್ಲಿ ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದಿದ್ದಾರೆ. ಪಬ್ಲಿಕ್ ನಳ್ಳಿಗಳು ಇಲ್ಲದ ಈ ಕಾಲದಲ್ಲಿ ಸಿಕ್ಕಿದ್ದು ಅವಕಾಶ ಎಂಬಂತೆ ಮಾನಸಿಕ ಅಸ್ವಸ್ಥ ವ್ಯಕ್ತಿ ಇಲ್ಲಿ ಜಳಕ ಮಾಡಿದ್ದಾರೆ. ನಗರದಲ್ಲಿ ಸುತ್ತುವ ಜನರು ಈ ದೃಶ್ಯವನ್ನು ಕಂಡು ತೆಪ್ಪಗೆ ಮುಂದು ಸರಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು