ಇತ್ತೀಚಿನ ಸುದ್ದಿ
ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ: ಗುರುವಂದನಾ ಕಾರ್ಯಕ್ರಮ
01/09/2026, 16:32
ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಹಾಗೂ ಪಚ್ಚನಾಡಿ ದೇವಿನಗರದ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿಯ ಸದಸ್ಯರು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀ ಮನೋಜ್ ಶಾಂತಿ ಅವರು ಗುರುಪೂಜೆ ನಡೆಸಿದರು.

ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರು ಹಾಗೂ ಗುರು ಶ್ರೇಷ್ಠರಾದ ಶ್ರೀ ಮಾಧವ ಸುವರ್ಣ ಯು. ಅವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗೌರವಧ್ಯಕ್ಷರಾದ ಶ್ರೀ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.













