9:47 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕುಂದಾಪುರ: ರಿವಾಲ್ವರ್ ತೋರಿಸಿ ಅಪಹರಿಸಿ ಮೊಬೈಲ್ ಅಂಗಡಿ ಮಾಲೀಕನಿಂದ ಲಕ್ಷಾಂತರ ರೂಪಾಯಿ ಲೂಟಿಗೈದ ದುಷ್ಕರ್ಮಿಗಳು

22/09/2021, 23:05

ಕುಂದಾಪುರ(reporterkarnataka.com): ಮೊಬೈಲ್ ಅಂಗಡಿ ಮಾಲೀಕನಿಗೆ ದುಷ್ಕರ್ಮಿಗಳ ತಂಡವೊಂದು ರಿವಾಲ್ವರ್ ತೋರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ಸುಲಿಗೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.  

ಬೈಂದೂರಿನ ಮುಸ್ತಾಫ್ ಎಂಬವರು ನಗದು ಹಾಗೂ ಸೊತ್ತು ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ. ಅವರು ಎಂದಿನಂತೆ ಸೆ.17ರಂದು ರಾತ್ರಿ ಶಾಪ್ ಬಂದ್ ಮಾಡಿ ಕುಂದಾಪುರದ ಫ್ಲ್ಯಾಟ್ ಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಮೂವರೊಂದಿಗೆ ಬಂದ ಮುಕ್ತಾರ್ ಎಂಬಾತ ಮುಸ್ತಾಫ್ ನನ್ನು ಅಡ್ಡಗಟ್ಟಿ ಕಾರಿನೊಳಗೆ ಎಳೆದೊಯ್ದಿದ್ದು, ಬಂದೂಕು ತೋರಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಹೋಗುವ ದಾರಿಮಧ್ಯೆ ಆರೋಪಿಗಳು ಬೆಂಗಳೂರಿನ ಎಟಿಎಂ ಹಾಗೂ ಸ್ವೈಪಿಂಗ್ ಮೆಷಿನ್ ನಿಂದ ₹ 3,14,100 ಡ್ರಾ ಮಾಡಿಕೊಂಡಿದ್ದಾರೆ. ಬಳಿಕ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ, ಮುಸ್ತಾಫ್ ಬಳಿಯಿಂದ ಮೊಬೈಲ್ ವಶಕ್ಕೆ ಪಡೆದ ಅರೋಪಿಗಳು, ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ತಮ್ಮ ಖಾತೆಗೆ ₹ 50 ಸಾವಿರ ಜಮಾ ಮಾಡಿಕೊಂಡಿದ್ದರು. ಚೆಕ್ ಬುಕ್ ಪಡೆದುಕೊಂಡು ಸಹಿ ಮಾಡಲು ಹೇಳಿದ್ದಾರೆ. ಅಲ್ಲದೆ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ದಾಖಲೆ, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಕೊಡುವುದಿಲ್ಲ ಬೆದರಿಸಿದ್ದಾರೆ. ಬಳಿಕ ಸೆ.18 ರಂದು ರಾತ್ರಿ 9.30ರ ವೇಳೆಗೆ ಆರೋಪಿಗಳು ಮುಸ್ತಾಫ್ ಅವರನ್ನು ಬಿಟ್ಟಿದ್ದಾರೆ. ಆರೋಪಿಗಳು ಮುಸ್ತಾಫ್ ಅವರಿಂದ ಒಟ್ಟು ₹ 4,64,175 ನಗದು ಹಾಗೂ ₹1,00,000 ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮುಸ್ತಾಫ್ ದೂರು ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು