11:05 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು