10:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು