5:53 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು