ಇತ್ತೀಚಿನ ಸುದ್ದಿ
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್ಡಿಪಿಐ ಆಕ್ರೋಶ
18/09/2026, 22:41
ಮಂಗಳೂರು(reporterkarnataka.com): ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ.
ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ, ಅಬ್ದುಲ್ ರಹ್ಮಾನ್ ಕೊಲೆ ನಡೆದ ಸಂದರ್ಭದಲ್ಲಿ ಮುಸ್ಲಿಂ ನಾಯಕರು ಧ್ವನಿ ಎತ್ತಿದ್ದರೂ, ಇದೀಗ ಆ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಾಯಕರಿಗೆ ಸಂಘಪರಿವಾರದೊಂದಿಗೆ ವ್ಯವಹಾರಿಕ ಸಂಬಂಧಗಳಿವೆ ಎಂದು ಆರೋಪಿಸಿದ ಅವರು, ಜಿಲ್ಲೆಯ ಪ್ರಭಾವಿಗಳ ಅನೈತಿಕ ಸಂಬಂಧಗಳೇ ರಹೀಂ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಗಲು ಕಾರಣವಾಗಿದೆ ಎಂದು ದೂರಿದರು. ಅಲ್ಪಸಂಖ್ಯಾತ ನಾಯಕರನ್ನು ತುಳಿಯಲು ಯಾರು ಕಾರಣ ಎಂಬುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಅನ್ವರ್ ಸಾದತ್ ಎಚ್ಚರಿಸಿದರು.












