5:51 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು