1:43 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು