12:15 AM Monday7 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು