9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು