6:12 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿಯ ಕಾಲೆಳೆದ ಮತ್ತೊಬ್ಬ ಮಾಜಿ ಸಿಎಂ!: ಬಿಎಸ್ ವೈ ರಾಜೀನಾಮೆ ಬಗ್ಗೆ ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

24/09/2021, 21:12

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇನ್ನೊಬ್ಬ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲೆಳೆದ ಘಟನೆ ವಿಧಾನ ಸಭೆಯಲ್ಲಿ ನಡೆಯಿತು.

ಶೂನ್ಯ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ರಾಜ್ಯದಲ್ಲಿ ಆಪರೇಶನ್ ಕಮಲ ಮೂಲಕ ಬಿಜೆಪಿಯನ್ನು ಆಡಳಿತಕ್ಕೆ ತಂದವರು ಯಡಿಯೂರಪ್ಪ ಅವರು. ಆದರೆ ಬಿಜೆಪಿ ಹೈಕಮಾಂಡ್ ಬಲವಂತದಿಂದ 75ರ ಹರೆಯದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಸಿತು. ಯಡಿಯೂರಪ್ಪ 

ಅವರು ಸೂಚಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ನೀಡಲಾಯಿತು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಯಡಿಯೂರಪ್ಪ ಅವರು ತನ್ನ ಮೇಲೆ ಯಾರೂ ಬಲವಂತ ಮಾಡಿಲ್ಲ. ಬೇರೆಯವರಿಗೆ ಅವಕಾಶ ನೀಡಲು ರಾಜೀನಾಮೆ ನೀಡಿದೆ. ಈ ವಿಷಯವನ್ನು ರಾಜೀನಾಮೆ ನೀಡಿದ ದಿನವೇ ಸ್ಪಷ್ಟಪಡಿಸಿದ್ದೇನೆ ಎಂದರು.

‘ಹಾಗಾದರೆ ಕಣ್ಣಲ್ಲಿ ನೀರು ಯಾಕೆ ಬಂತು?’ ಎಂದು ಪ್ರತಿಪಕ್ಷದ ಕಡೆಯಿಂದ ಸದಸ್ಯರೊಬ್ಬರು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಮತ್ತೆ ಮಾತನಾಡಿದ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಕಣ್ಣೀರನ್ನು ಆನಂದ ಬಾಷ್ಫ ಎಂದು ಸಮರ್ಥಿಸಿಕೊಳ್ಳುತ್ತಾರೆ. ಅವರು ಏನೇ ಹೇಳಲಿ, ಬಿಜೆಪಿ ಹೈಕಮಾಂಡ್ ಮಾತ್ರ ಬಲವಂತದಿಂದ ಯಡಿಯೂರಪ್ಪ ಅವರ ರಾಜೀನಾಮೆ ಸ್ವೀಕರಿಸಿದೆ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು