5:54 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಂಗಳೂರನ್ನು ವಿಶ್ವದಲ್ಲೇ ಉನ್ನತ ಬಂದರು ಆಗಿ ಪರಿವರ್ತನೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅಭಯ

24/09/2021, 21:57

ಮಂಗಳೂರು(reporterkarnataka.com):ಲಾಭದಾಯಕವಾಗಿ ನಡೆಯುತ್ತಿರುವ ನವ ಮಂಗಳೂರು ಬಂದರು ಟ್ರಸ್ಟ್ ಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರಪಂಚದಲ್ಲಿಯೇ ಉನ್ನತ ಬಂದರನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರದ ಬಂದರು, ಶಿಪ್ಪಿಂಗ್, ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಹೇಳಿದರು. 
ಅವರು ಶುಕ್ರವಾರ ನವಮಂಗಳೂರು ಬಂದರು ಟ್ರಸ್ಟ್ ಬಳಿಯ ವಹಿವಾಟು ಅಭಿವೃದ್ದಿ ಕೇಂದ್ರ (ಬಿಡಿಸಿ)ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. 
ನವ ಮಂಗಳೂರು ಬಂದರು ಸ್ಥಾಪನೆಯಾದ ನಂತರ ಹಲವು ಮೈಲಿಗಲ್ಲನ್ನು ಸ್ಥಾಪಿಸಲಾಗಿದೆ. ಲಾಭದಾಯಕವಾಗಿಯೇ ನಡೆಯುತ್ತಿರುವ ಈ ಬಂದರಿನಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಲು ಕೇಂದ್ರ ಸರಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಈ ದಿಸೆಯಲ್ಲಿ 2300 ಕೋಟಿ ರೂ.ಗಳ ವೆಚ್ಚದ ಗ್ಯಾಸ್ ಟರ್ಮಿನಲ್ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದರು. 
ಈ ಬಂದರಿನಿಂದ ರಫ್ತುದಾರರಿಗೆ ಈಗಾಗಲೇ ಸಾಕಷ್ಟು ಅನುಕೂಲವಾಗಿದೆ. ಅದರೊಂದಿಗೆ ದೇಶದ ಆರ್ಥಿಕ ಅಭಿವೃದ್ಧಿಗೂ ಸಹಕಾರ ಆಗಿದೆ, ದೇಶದ ಎಲ್ಲ ಬಂದರುಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಬದ್ಧವಾಗಿದೆ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್‍ಎಂಪಿಟಿಯಲ್ಲಿ ಕೈಗೊಳ್ಳಬೇಕಾದ ಹಲವು ಯೋಜನೆಗಳ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಿದ್ದರು, ಅವುಗಳನ್ನು ಆದ್ಯತೆಯ ಮೇರೆಗೆ ಕಾರ್ಯಗತ ಮಾಡಲಾಗುವುದು ಎಂದು ಹೇಳಿದರು. 


ಆಧುನಿಕ ಭಾರತದ ನಿರ್ಮಾಣದಲ್ಲಿ ಕರ್ನಾಟಕದ ಪಾತ್ರ ಅತಿ ಮಹತ್ವದ್ದಾಗಿದೆ,  ಎಲ್ಲ ರಂಗಗಳಲ್ಲೂ ಮಹತ್ವದ ಕಾರ್ಯಗಳು ಕರ್ನಾಟಕದಿಂದ ಆಗುತ್ತಿವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವ ಗುರಿ ಹಾಕಿಕೊಂಡಿದ್ದಾರೆ. ಇದಕ್ಕೆ ದೇಶದ ಪ್ರತಿಯೊಬ್ಬರೂ ನಿμÉ್ಠಯಿಂದ ಕೈಜೋಡಿಸುವ ಅಗತ್ಯವಿದೆ. ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವ ಮೂಲಕ ದೇಶ ಭಕ್ತಿಯನ್ನು ಮೆರೆಯಬೇಕಾಗಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ ವೇದಿಕೆಯಲ್ಲಿದ್ದರು. 
ಎನ್‍ಎಂಪಿಟಿ ಅಧ್ಯಕ್ಷ ಡಾ.ಎ.ವಿ. ರಮಣ್ ಸ್ವಾಗತಿಸಿದರು. 
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಎನ್‍ಎಂಪಿಟಿಯ ನೌಕರರು ಹಾಗೂ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು