2:12 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ

25/09/2021, 13:33

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. 




ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.  ಪಿ. ಎಸ್. ಯಡಪಡಿತ್ತಾಯ  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ನಮ್ಮ ಜೀವನದಲ್ಲಿ ಇಚ್ಛಾಶಕ್ತಿ, ಸಾಮರ್ಥ್ಯ, ಹಾಗೂ ಅವಕಾಶಗಳನ್ನು ಅವಳಡಿಸಿಕೊಂಡು ನಡೆಯಿರಿ, ಯಶಸ್ಸು ನಿಮ್ಮದಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜೀವನದ  ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಪಠ್ಯಕ್ರಮದ ಜೊತೆ ಸೇವೆಯನ್ನು ಮೈಗೂಡಿಸಿಕೊಳ್ಳಿ. ಸಾಂಸ್ಥಿಕ,  ಸಾಮಾಜಿಕ ಜವಾಬ್ದಾರಿಯನ್ನು ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. 

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಧಿಕಾರಿ ಡಾ. ಕಿಶೋರ್ ಮಾತನಾಡಿ, ಬೇರೆಯವರ ಮುಖದಲ್ಲಿ ನಗು ತರಿಸುವುದು ಶ್ರೇಷ್ಠ ಕೆಲಸ ಹಾಗೂ ಇನ್ನೊಬ್ಬರಿಗೋಸ್ಕರ  ಬದುಕುವ  ಬದುಕು  ಅಮೂಲ್ಯ ವಾದದ್ದು ಎಂದು ಹೇಳಿದರು.


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಅವಕಾಶಗಳನ್ನು ಬಳಸಿ ಕೊಳ್ಳಿ. ಸಮಾಜದಲ್ಲಿ ಉತ್ತಮ ವ್ಯಕ್ತ್ತಿಗಳಾಗಿ ಬಾಳಲು ರಾ.ಸೆ.ಯೋ ಉತ್ತಮ ವೇದಿಕೆ ಎಂದರು 


ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ವಹಿಸಿದ್ದರು. 


ಕೆನರಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರೇಮಲತಾ ವಿ., ಕೆನರಾ ಕಾಲೇಜಿನ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ಕಾವ್ಯಶ್ರೀ ಕೆ. ಉಪಸ್ಥಿತರಿದ್ದರು.



ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನಪೋಯ ವಿಶ್ವವಿದ್ಯಾನಿಲಯ ಕೊಡಮಾಡುವ ಯುವ ಸೇನಾ ಪ್ರಶಸ್ತಿಯನ್ನು ಪಡೆದ ಕಾಲೇಜಿನ ವಿದ್ಯಾರ್ಥಿ  ಅಭಿನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು