10:18 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ;  ಬಿಜೆಪಿ ಶಾಸಕರ ಆಪ್ತನ ಬಂಧನ

25/05/2021, 17:46

ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋಪಿ. ಬಾಬು ಅವರು ಕೋವಿಡ್ ವಾರಿಯರ್ ಗಳನ್ನು ಬೆದರಿಸಿ ತನಗೆ ಬೇಕಾದವರಿಗೆ ಬೆಡ್ ವಿತರಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೊಮ್ಮನಹಳ್ಖಿ ವಾರ್ ರೂಮ್ ನ ಸಿಬ್ಬಂದಿಗಳ ಹೇಳಿಕೆ ಮತ್ತು ವಾರ್ ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧಾರದಲ್ಲಿ ಬಾಬು ಅವರನ್ನು ದಸ್ತಗಿರಿ ಮಾಡಲಾಗಿದೆ. ಈ ಹಿಂದೆ ವಿಚಾರಣೆಗೆ ಕರೆದಾಗ ಬಾಬು ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸೋಂಕು ಗುಣಮುಖವಾದ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು