9:31 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ

25/09/2021, 19:32

ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ ನಡೆಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷ ಹಾಗೂ ಸಮಾಜ ಸೇವಕ ಬನ್ನೂರಿನ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅಧ್ಯಕ್ಷತೆ ವಹಿಸಿದ್ದರು.

ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಜನಪದೋತ್ಸವ ಮತ್ತು ಹಿರಿಯ ಸಾಹಿತಿಗಳಿಗೆ ಗೌರವಾರ್ಥವಾಗಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ ನಡೆಯಿತು.

ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯನ್ನು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಮತ್ತು ಬನ್ನೂರಿನ ಸಮಾಜ ಸೇವಕ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಸುರ್ವೆ, ಕಲ್ಮೇಶ್ವರ ಸ್ವಾಮಿಗಳು, ಸಾಹಿತಿಗಳಾದ ಡಾ.ಭದ್ರಾವತಿ ರಾಮಾಚಾರಿ, ಪ್ರತಿಷ್ಠಾನದ ಸಂಚಾಲಕರುಗಳಾದ ಬಿ.  ಎಚ್.ಹೋಂಗಲ್, ಉಲ್ಲಾಸ್ ರಾವ್ ರೇಣುಕೆ, ರಾಜ್ ಸಂಪಾಜೆ, ಕರಿಬಸಪ್ಪ ವೈ.ಶೋಗಿ ಅವರು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇನ್ನು ಇದೆ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ,ತಾಲ್ಲೂಕುಗಳಿಂದ ಆಗಮಿಸಿದ ಕಲಾ ತಂಡದ ಕಲಾವಿದರಿಂದ ವಚನ ಗಾಯನ, ಜಾನಪದ ಗಾಯನ, ನೃತ್ಯ ಪ್ರದರ್ಶನ ಹೀಗೆ ಅನೇಕ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದೆ ವೇಳೆ ಬಾಗಲಕೋಟೆ ಜಿಲ್ಲೆಯ ನಗರಾಳ ಗ್ರಾಮದ ಯೋಗಪಟು ವಿಷ್ಣು ನ್ಯಾಮಗೌಡರು ರವರ ಯೋಗ ಪ್ರದರ್ಶನವನ್ನು ಕಂಡು ಮತ್ತು ನಿರೂಪಣೆ ಮಾಡಿದ್ದ ರಾಜ್ ಸಂಪಾಜೆ ಅವರಿಗೆ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಡಾ.ಕೆ.ಮಹೇಂದ್ರ ಸಿಂಗ್ ಕಾಳಪ್ಪ ಅವರು ಧನಸಹಾಯ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು