3:05 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ

25/09/2021, 19:32

ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ ನಡೆಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷ ಹಾಗೂ ಸಮಾಜ ಸೇವಕ ಬನ್ನೂರಿನ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅಧ್ಯಕ್ಷತೆ ವಹಿಸಿದ್ದರು.

ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಜನಪದೋತ್ಸವ ಮತ್ತು ಹಿರಿಯ ಸಾಹಿತಿಗಳಿಗೆ ಗೌರವಾರ್ಥವಾಗಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ ನಡೆಯಿತು.

ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯನ್ನು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಮತ್ತು ಬನ್ನೂರಿನ ಸಮಾಜ ಸೇವಕ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಸುರ್ವೆ, ಕಲ್ಮೇಶ್ವರ ಸ್ವಾಮಿಗಳು, ಸಾಹಿತಿಗಳಾದ ಡಾ.ಭದ್ರಾವತಿ ರಾಮಾಚಾರಿ, ಪ್ರತಿಷ್ಠಾನದ ಸಂಚಾಲಕರುಗಳಾದ ಬಿ.  ಎಚ್.ಹೋಂಗಲ್, ಉಲ್ಲಾಸ್ ರಾವ್ ರೇಣುಕೆ, ರಾಜ್ ಸಂಪಾಜೆ, ಕರಿಬಸಪ್ಪ ವೈ.ಶೋಗಿ ಅವರು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇನ್ನು ಇದೆ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ,ತಾಲ್ಲೂಕುಗಳಿಂದ ಆಗಮಿಸಿದ ಕಲಾ ತಂಡದ ಕಲಾವಿದರಿಂದ ವಚನ ಗಾಯನ, ಜಾನಪದ ಗಾಯನ, ನೃತ್ಯ ಪ್ರದರ್ಶನ ಹೀಗೆ ಅನೇಕ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದೆ ವೇಳೆ ಬಾಗಲಕೋಟೆ ಜಿಲ್ಲೆಯ ನಗರಾಳ ಗ್ರಾಮದ ಯೋಗಪಟು ವಿಷ್ಣು ನ್ಯಾಮಗೌಡರು ರವರ ಯೋಗ ಪ್ರದರ್ಶನವನ್ನು ಕಂಡು ಮತ್ತು ನಿರೂಪಣೆ ಮಾಡಿದ್ದ ರಾಜ್ ಸಂಪಾಜೆ ಅವರಿಗೆ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಡಾ.ಕೆ.ಮಹೇಂದ್ರ ಸಿಂಗ್ ಕಾಳಪ್ಪ ಅವರು ಧನಸಹಾಯ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು