3:49 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ

25/09/2021, 19:32

ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ ನಡೆಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷ ಹಾಗೂ ಸಮಾಜ ಸೇವಕ ಬನ್ನೂರಿನ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅಧ್ಯಕ್ಷತೆ ವಹಿಸಿದ್ದರು.

ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಜನಪದೋತ್ಸವ ಮತ್ತು ಹಿರಿಯ ಸಾಹಿತಿಗಳಿಗೆ ಗೌರವಾರ್ಥವಾಗಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ ನಡೆಯಿತು.

ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯನ್ನು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಮತ್ತು ಬನ್ನೂರಿನ ಸಮಾಜ ಸೇವಕ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಸುರ್ವೆ, ಕಲ್ಮೇಶ್ವರ ಸ್ವಾಮಿಗಳು, ಸಾಹಿತಿಗಳಾದ ಡಾ.ಭದ್ರಾವತಿ ರಾಮಾಚಾರಿ, ಪ್ರತಿಷ್ಠಾನದ ಸಂಚಾಲಕರುಗಳಾದ ಬಿ.  ಎಚ್.ಹೋಂಗಲ್, ಉಲ್ಲಾಸ್ ರಾವ್ ರೇಣುಕೆ, ರಾಜ್ ಸಂಪಾಜೆ, ಕರಿಬಸಪ್ಪ ವೈ.ಶೋಗಿ ಅವರು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇನ್ನು ಇದೆ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ,ತಾಲ್ಲೂಕುಗಳಿಂದ ಆಗಮಿಸಿದ ಕಲಾ ತಂಡದ ಕಲಾವಿದರಿಂದ ವಚನ ಗಾಯನ, ಜಾನಪದ ಗಾಯನ, ನೃತ್ಯ ಪ್ರದರ್ಶನ ಹೀಗೆ ಅನೇಕ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದೆ ವೇಳೆ ಬಾಗಲಕೋಟೆ ಜಿಲ್ಲೆಯ ನಗರಾಳ ಗ್ರಾಮದ ಯೋಗಪಟು ವಿಷ್ಣು ನ್ಯಾಮಗೌಡರು ರವರ ಯೋಗ ಪ್ರದರ್ಶನವನ್ನು ಕಂಡು ಮತ್ತು ನಿರೂಪಣೆ ಮಾಡಿದ್ದ ರಾಜ್ ಸಂಪಾಜೆ ಅವರಿಗೆ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಡಾ.ಕೆ.ಮಹೇಂದ್ರ ಸಿಂಗ್ ಕಾಳಪ್ಪ ಅವರು ಧನಸಹಾಯ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು