11:04 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಕಲ್ಲಿಕೋಟೆ ಏರ್ ಪೋರ್ಟ್ ನಲ್ಲಿ ಇಳಿದ ವಿಮಾನ

25/09/2021, 23:29

ಮಂಗಳೂರು(reporterkarnataka.com): ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದುಬೈ ಹಾಗೂ ದಮಾಮ್ ನಿಂದ ಹೊರಟ ಎರಡು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಲ್ಯಾಂಡ್ ಆಗಿದೆ.

ದಮಾಮ್ ನಿಂದ 150 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಗ್ಗಿನ ಜಾವ 4.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಮಂಜು ಹಾಗೂ ಮೋಡ ಮುಸುಕಿದ ವಾತಾವರಣ ಇದ್ದ ಕಾರಣ ಬ್ಯಾಡ್ ಲೈಟ್ ಕಾರಣದಿಂದ ವಿಮಾನವನ್ನು ಮಂಗಳೂರಿನಲ್ಲಿ ಇಳಿಸದೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈಯಿಂದ ಹೊರಟ ವಿಮಾನ ಕೂಡ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕಲ್ಲಿಕೋಟೆಯಲ್ಲಿ ಇಳಿಸಲಾಯಿತು.

ಕಲ್ಲಿಕೋಟೆಯಲ್ಲಿ ವಿಮಾನ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು