9:16 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! !

25/05/2021, 18:52

ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್.

ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್ಲಿರುವ ವ್ಯಕ್ತಿತ್ವ. ಸದಾ ವಿವಾದವನ್ನು ಮೈಗೆ ಎಳೆಯುವ ವ್ಯಕ್ತಿ. ಇದೀಗ ಅವರು ಡ್ಯಾನ್ಸ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ.

ಶಾಸಕರ ಡ್ಯಾನ್ಸ್ ಗೆ ಹೊನ್ನಾಳಿ ಕ್ಷೇತ್ರದ ಜನರು ಮನಸೋತಿದ್ದಾರೆ. ಇಂತಹ ಶಾಸಕರನ್ನು ಪಡೆದ ನಾವು ಪುಣ್ಯವಂತರು ಎಂದು ಕ್ಷೇತ್ರದ ಕೆಲವು ಮಂದಿ ರೇಣುಕಾಚಾರ್ಯ ಅವರನ್ನು ಹಾಡಿ ಹೊಗಳಿದ್ದಾರೆ.


ಸೋಂಕಿತರನ್ನು ಮನರಂಜಿಸಲು ಶಾಸಕ ರೇಣುಕಾ ಚಾರ್ಯ ‘ಹುಟ್ಟಿದರೆ ಕನ್ನಡನಾಡಲ್ಲೇ ಹುಟ್ಟಬೇಕು’ ಎಂಬ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನತೆ ಇನ್ನಷ್ಟು ಮಂದಿ ಶಾಸಕರ ಜತೆ ಹೆಜ್ಜೆ ಸೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು