1:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! !

25/05/2021, 18:52

ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್.

ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್ಲಿರುವ ವ್ಯಕ್ತಿತ್ವ. ಸದಾ ವಿವಾದವನ್ನು ಮೈಗೆ ಎಳೆಯುವ ವ್ಯಕ್ತಿ. ಇದೀಗ ಅವರು ಡ್ಯಾನ್ಸ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ.

ಶಾಸಕರ ಡ್ಯಾನ್ಸ್ ಗೆ ಹೊನ್ನಾಳಿ ಕ್ಷೇತ್ರದ ಜನರು ಮನಸೋತಿದ್ದಾರೆ. ಇಂತಹ ಶಾಸಕರನ್ನು ಪಡೆದ ನಾವು ಪುಣ್ಯವಂತರು ಎಂದು ಕ್ಷೇತ್ರದ ಕೆಲವು ಮಂದಿ ರೇಣುಕಾಚಾರ್ಯ ಅವರನ್ನು ಹಾಡಿ ಹೊಗಳಿದ್ದಾರೆ.


ಸೋಂಕಿತರನ್ನು ಮನರಂಜಿಸಲು ಶಾಸಕ ರೇಣುಕಾ ಚಾರ್ಯ ‘ಹುಟ್ಟಿದರೆ ಕನ್ನಡನಾಡಲ್ಲೇ ಹುಟ್ಟಬೇಕು’ ಎಂಬ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನತೆ ಇನ್ನಷ್ಟು ಮಂದಿ ಶಾಸಕರ ಜತೆ ಹೆಜ್ಜೆ ಸೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು