9:32 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್

26/09/2021, 21:39

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ಧೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.

ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು