9:37 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್

26/09/2021, 21:39

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ಧೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.

ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು