5:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಭಾರತ್ ಬಂದ್: ಕುರುಕ್ಷೇತ್ರದ ಸಮೀಪ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ 

27/09/2021, 10:22

ಹೊಸದಿಲ್ಲಿ(reporterkarnataka.com): ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕುರುಕ್ಷೇತ್ರದ ಬಳಿ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾ ಜನರನ್ನು ಬಂದ್‌ ಬೆಂಬಲಿಸುವಂತೆ ಮನವಿ ಮಾಡಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ 10 ತಿಂಗಳುಗಳನ್ನು ಪೂರೈಸಿದೆ. ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯ ಮೇಲೆ ಸಾಂವಿಧಾನಿಕ ಖಾತರಿಗಾಗಿ ರೈತರು ಒತ್ತಾಯಿಸುತ್ತಿದ್ದಾರೆ. ಹೊಸ ಕಾನೂನುಗಳು ಖಾಸಗಿ ಸಂಸ್ಥೆಗಳು ಕೃಷಿ ವಲಯವನ್ನು ಸ್ವಾಧೀನಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ  ಸಂಸ್ಥೆಯಾಗಿದ್ದು, ಜನರು ಬಂದ್‌ಗೆ ಸೇರುವಂತೆ ಮನವಿ ಮಾಡಿದ್ದಾರೆ. ಸಂಸ್ಥೆಯು ರಾಜಕೀಯ ಪಕ್ಷಗಳನ್ನು “ಪ್ರಜಾಪ್ರಭುತ್ವ ಮತ್ತು ಫೆಡರಲಿಸಂ ತತ್ವಗಳನ್ನು ರಕ್ಷಿಸುವ ನಿಟ್ಟಿನಲ್ಲಿ ರೈತರೊಂದಿಗೆ ನಿಲ್ಲುವಂತೆ” ಕೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು