4:15 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು