11:14 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಐಷಾರಾಮಿ ಕಾರು ಅವಘಡ : ನಜ್ಜುಗುಜ್ಜಾದ ಕ್ಯಾಬ್

27/09/2021, 11:41

ಬೆಂಗಳೂರು (Reporterkarnataka.com) ಇತ್ತೀಚೆಗೆ ನಡೆದ ತಮಿಳು ನಾಡು ಶಾಸಕನ ಮಗನ ಐಷಾರಾಮಿ ಕಾರು ಅಪಘಾತದ ಸುದ್ದಿ ಹಸಿಯಾಗಿರಯವಾಗಲೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. 

ವೀಕೆಂಡ್‌ನಲ್ಲಿ ಮೋಜು ಮಸ್ತಿಗಾಗಿ ತಮ್ಮ ಬಳಿ ಇರುವ ಐಷಾರಾಮಿ ಕಾರುಗಳನ್ನು ರೋಡಿಗಿಳಿಸೋ ದೊಡ್ಡವರ ಮಕ್ಕಳು, ರ‍್ಯಾಷ್ ಡ್ರೈವಿಂಗ್ ಮಾಡಿ ಅಪಘಾತ ಮಾಡುತ್ತಿರುವುದು ಇನ್ನೂ ನಿಂತಿಲ್ಲ. ಪದೇ ಪದೇ ಭೀಕರ ಅಪಘಾತಗಳು ಸಂಭವಿಸಿ ದುರಂತಗಳು ನಡೀತಿದ್ರು ನಗರದಲ್ಲಿ ಯುವಜನತೆ ಮಾತ್ರ ಬುದ್ದಿ ಕಲೀತಿಲ್ಲ. ಬೆಂಗಳೂರಿನಲ್ಲಿ ಐಷಾರಾಮಿ ಕಾರು ಮಾಲೀಕರ ಶೋಕಿ ಮುಂದುವರಿದಿದ್ದು, ಯಾವುದಕ್ಕೂ ಕೇರ್ ಮಾಡ್ತಿಲ್ಲ.

ನಿನ್ನೆ ತಡರಾತ್ರಿ ಬೆಂಗಳೂರಿನ ದೊಮ್ಮಲೂರು ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಪೋರ್ಷೇ ಕಾರು ಇಟಿಯೋಸ್ ಕ್ಯಾಬ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ನಂತರ ಕಮಾಂಡೋ ಆಸ್ಪತ್ರೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಟಿಯೋಸ್ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಒಂದೂವರೆ ಕೋಟಿ ಮೌಲ್ಯದ ಪೋರ್ಷೇ ಕಂಪನಿಯ ಈ ರೇಸ್ ಕಾರು ೨ ಆಸನಗಳನ್ನು ಹೊಂದಿದೆ. ೩,೯೯೫ ಸಿಸಿಯ ಸಾಮರ್ಥ್ಯವನ್ನು ಹೊಂದಿರುವ ಪೋರ್ಷೇ ಕಾರು ಡಿಕ್ಕಿಯ ರಭಸಕ್ಕೆ ಮುಂಭಾಗದ ಎಂಜಿನ್, ಗೇರ್ ಬಾಕ್ಸ್, ೨ ಚಕ್ರಗಳಿಗೆ ಹಾನಿಯಾಗಿದೆ. ಇನ್ನು ಇಟಿಯೋಸ್ ಕ್ಯಾಬ್ ಹಿಂಬದಿ ಸಂಪೂರ್ಣ ಜಖಂ ಆಗಿದ್ದು ಚಾಲಕ ಕೃಷ್ಣಮೂರ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೂ ಉದ್ಯಮಿ ಮಗ ಜವೇರಾ ಮೆವಾನಿ ಪೋರ್ಷೇ ಕಾರನ್ನು ಡ್ರಂಕ್ & ಡ್ರೈವ್ ಮಾಡಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಹಲಸೂರು ಟ್ರಾಫಿಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.. ಇನ್ನೂ ಕಾರಿನಲ್ಲಿದ್ದ ಜವೇರ್ ಪತ್ನಿ ಶ್ರೇಯಾಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು