1:47 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

1 ವರ್ಷದೊಳಗೆ ನಕ್ಸಲ್ ಹಿಂಸಾಚಾರಕ್ಕೆ ಸಂಪೂರ್ಣ ಕಡಿವಾಣ: ಸಿಎಂಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿಶ್ ಶಾ

27/09/2021, 12:56

ಹೊಸದಿಲ್ಲಿ(reporterkarnataka.com): ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು,ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಾವೋವಾದಿ ಬಂಡುಕೋರ ಗುಂಪುಗಳಿಗೆ ಹಣದ ಹರಿವನ್ನು ತಡೆಗಟ್ಟಲು ಜಂಟಿ ಕಾರ್ಯತಂತ್ರ ರೂಪಿಸಬೇಕು ಎಂದು ಒಡಿಶಾ, ತೆಲಂಗಾಣ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿಗಳ ಸಭೆಯಲ್ಲಿ ಅವರು ಹೇಳಿದರು.

ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದೆ. ಎಡಪಂಥೀಯ ಉಗ್ರಗಾಮಿ ಹಿಂಸಾಚಾರದ ಸಾವಿನ ಸಂಖ್ಯೆ ಒಂದು ವರ್ಷದಲ್ಲಿ 200 ಕ್ಕೆ ಇಳಿದಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಿನ ವರ್ಷಕ್ಕೆ ಎಲ್ಲ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳಾದ ನವೀನ್ ಪಟ್ನಾಯಕ್ (ಒಡಿಶಾ), ಕೆ. ಚಂದ್ರಶೇಖರ್ ರಾವ್(ತೆಲಂಗಾಣ), ನಿತೀಶ್ ಕುಮಾರ್(ಬಿಹಾರ), ಶಿವರಾಜ್ ಸಿಂಗ್ ಚೌಹಾಣ್(ಮಧ್ಯ ಪ್ರದೇಶ), ಉದ್ಧವ್ ಠಾಕ್ರೆ(ಮಹಾರಾಷ್ಟ್ರ) ಮತ್ತು ಹೇಮಂತ್ ಸೊರೆನ್(ಜಾರ್ಖಂಡ್) ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಗಿರಿರಾಜ್ ಸಿಂಗ್, ಅರ್ಜುನ್ ಮುಂಡಾ ಮತ್ತು ನಿತ್ಯಾನಂದ ರೈ ಸಹ ಇದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಭಾಗವಹಿಸಲಿಲ್ಲ. ಈ ರಾಜ್ಯಗಳನ್ನು ಸಚಿವರು ಅಥವಾ ಹಿರಿಯ ಅಧಿಕಾರಿಗಳು ಪ್ರತಿನಿಧಿಸಿದ್ದರು
ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು,ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.2009 ರಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 2,258 ರಿಂದ 2020 ರಲ್ಲಿ 665 ಕ್ಕೆ ಮಾವೋವಾದಿಗಳ ಹಿಂಸಾಚಾರದ ಘಟನೆಗಳು ಶೇಕಡ 70 ರಷ್ಟು ಕಡಿಮೆಯಾಗಿದೆ. ಮಾವೋವಾದಿಗಳ ಪ್ರಭಾವದಲ್ಲಿರುವ ಪ್ರದೇಶಗಳು 2010 ರಲ್ಲಿ 96 ಜಿಲ್ಲೆಗಳಿದ್ದವು. ಭೌಗೋಳಿಕ ಹರಡುವಿಕೆ 2020 ರಲ್ಲಿ ಕೇವಲ 53ಕ್ಕೆ ಇಳಿದಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವವನ್ನು ಪ್ರತಿ ಹಂತಕ್ಕೂ ಹರಡಲು ಮತ್ತು ಅಭಿವೃದ್ಧಿಯಾಗದ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಮಾವೋವಾದಿ ದಂಗೆಯನ್ನು ನಿರ್ಮೂಲನೆ ಮಾಡುವುದು ಅಗತ್ಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು