8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/09/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು 
ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ.
ದಲ್ಲಾಳಿಗಳಿಗೆ ಬಾರಿ ನಷ್ಟವಾಗುವುದರಿಂದ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದು ಅವರು ನುಡಿದರು.
ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರುತ್ತಿದ್ದಾರೆ ಎಂದರು.
ರೈತರಿಗೆ ಅನ್ಯಾಯವಾಗುತ್ತದೆ ಎಂದಾದರೆ ಬಹಿರಂಗ ಸವಾಲಕ್ಕೆ ಬರಲಿ. ಯಾರಾದರೂ ಸಾಬೀತುಪಡಿಸಿದರೆ ಕಾನೂನನ್ನು ಹಿಂಪಡೆಯುತ್ತೇವೆ ಎಂದು ಸವದಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು