4:21 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು