7:25 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು