9:41 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಕೃಷಿ ಕಾಯ್ದೆ: ಕುಂದಾಪುರದಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

27/09/2021, 19:56

ಕುಂದಾಪುರ(reporterkarnataka.com): ಕೊರೊನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್ ಆರೋಪಿಸಿದರು.

ಅವರು ಕೃಷಿ ಕಾಯ್ದೆ, ವಿದ್ಯುತ್ ಮಸೂದೆ, ಕಾರ್ಮಿಕರ ಸಂಹಿತೆಗಳ ರದ್ದತಿಗಾಗಿ, ನಿರುದ್ಯೋಗ ಹಾಗೂ ಬೆಲೆ ಏರಿಕೆಯ ವಿರುದ್ದ ರಾಷ್ಟ್ರವ್ಯಾಪಿ ಭಾರತ್ ಬಂದ್ ಬೆಂಬಲಿಸಿ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಸೋಮವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕ ಎಚ್ ನರಸಿಂಹ ಮಾತನಾಡಿ, ಕೊರೋನಾ ಹಿನ್ನೆಲೆ ಎಲ್ಲಾ ವಿಭಾಗದ ಜನರು ಸಂಕಷ್ಟದಲ್ಲಿರುವ ಕಾರಣ ಮುಷ್ಕರದಲ್ಲಿ ಭಾಗಹಿಸದೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡುವ ಮೂಲಕ ಈ ಹೋರಾಟಕ್ಕೆ ನೈತಿಕ ಬೆಂಬಲವನ್ನು ಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರೈತ, ಕಾರ್ಮಿಕರ, ಹಾಗೂ ಎಲ್ಲಾ ವಿಭಾಗದ ಜನರ ಪರಿವಾಗಿ ಈ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.

ಪ್ರತಿಭಟನೆಯನ್ನುದ್ದೇಶಿಸಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಮಹಾಬಲ ವಡೇರಹೋಬಳಿ, ಅಂಗನವಾಡಿ ಸಂಘಟನೆಯ ತಾಲೂಕು ಅಧ್ಯಕ್ಷೆ ಆಶಾಲತಾ, ಆಟೋ ಚಾಲಕರ ಸಂಘದ ಚಂದ್ರಶೇಖರ ದೇವಾಡಿಗ,ಮಾತನಾಡಿದರು. ಡಿವೈಎಫ್‌ಐ ತಾಲೂಕು ಅಧ್ಯಕ್ಷ ರಾಜೇಶ ವಡೇರಹೋಬಳಿ, ಆಟೋ ಚಾಲಕ ಸಂಘದ ರಾಜು ದೇವಾಡಿಗ, ಬೀಡಿ ಯೂನಿಯನ್‌ನ ಬಲ್ಕಿಸ್, ಮುಖಂಡರಾದ ದಾಸ ಭಂಡಾರಿ, ಪ್ರಕಾಶ್ ಕೊಣಿ, ಸಂತೋಷ ಹೆಮ್ಮಾಡಿ, ಸಿಐಟಿಯು, ಡಿವೈಎಫ್‌ಐ, ಅಂಗನವಾಡಿ, ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು