4:22 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪುಟಾಣಿಗಳಿಗೆ ಗಂಟೆ ಬಾರಿಸುವ ಸಮಯ: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ಆರಂಭ? ಅ.21ರಿಂದ ಸಾಧ್ಯತೆ

28/09/2021, 08:48

ಬೆಂಗಳೂರು(reporterkarnataka.com):

ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20ಕ್ಕೆ ಮಧ್ಯಂತರ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು