10:32 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಪುಟಾಣಿಗಳಿಗೆ ಗಂಟೆ ಬಾರಿಸುವ ಸಮಯ: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ಆರಂಭ? ಅ.21ರಿಂದ ಸಾಧ್ಯತೆ

28/09/2021, 08:48

ಬೆಂಗಳೂರು(reporterkarnataka.com):

ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20ಕ್ಕೆ ಮಧ್ಯಂತರ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು