5:53 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ

28/09/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಪಟ್ಟಣದ ರಸ್ತೆ ದುರಂತಗಳಲ್ಲಿ ಗೋವುಗಳ ಸಾವು ಹೆಚ್ಚಾಗುತ್ತಿರುವ ಕುರಿತು ಮಾತನಾಡಿದ  ಹಿಂದೂ ಮುಖಂಡ ರಾಕೇಶ್ ಪಾಟೀಲ್, ಹೆತ್ತ ತಾಯಿಯು ಒಂದೇ ಗೋತಾಯಿಯೂ ಒಂದೇ. ಚಿಕ್ಕವರಿದ್ದಾಗ ತಾಯಿಯ ಎದೆ ಹಾಲನ್ನು ಕುಡಿದಿದ್ದೇವೆ.
ಸಾಯುವವರೆಗೂ ಗೋಮಾತೆಯ ಹಾಲನ್ನು ಕುಡಿಯುತ್ತೇವೆ. ಹಾಗಾಗಿ ಇಬ್ಬರು ನಮಗೆ ದೇವರ ಸಮಾನ. ಅಂತಹ ಕೋಟ್ಯಾನುಕೋಟಿ ದೇವತೆಗಳನ್ನು ಹೊಂದಿರುವ ಗೋ ತಾಯಿಯ ಈ ಪರಿಸ್ಥಿತಿಯನ್ನು ನಮಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ  ಸೂಕ್ತ ಪರಿಹಾರ ನೀಡುವಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ. ಗೋವುಗಳ ಸಾವಿಗೆ ತಕ್ಷಣವೆ ಕ್ರಮ ತೆಗೆದುಕೊಳ್ಳದಿದ್ದರೆ ಪುರಸಭೆ ಕಚೇರಿಗೆ  ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಯಾವುದೇ ಕಾರ್ಯ ಇನ್ನುವರೆಗೂ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟ ಬಿಡಾಡಿ ದನಗಳ ಮಾರಣಹೋಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಕೇಶ್ ಅವುಗಳನ್ನು ಸಂಸ್ಕಾರ ಮಾಡಿ ಮಾನವತೆ ಮೆರೆದಿದ್ದಾರೆ. ಮಸ್ಕಿ ಹಳ್ಳದ ಸೇತುವೆ ಮೇಲೆ ಹೆದ್ದಾರಿ ಬಸ್ಸುಗಳು ಜನಗಳ ಮೇಲೆ ಎಷ್ಟೋ ಬಾರಿ ಹೊಡೆದುಕೊಂಡು ಹೋಗಿದ್ದಾರೆ.  ಇಂತಿಷ್ಟು ಪುರಸಭೆ ಅಧಿಕಾರಿಗಳಿಗೆ ಕಾಳಜಿ ಇಲ್ಲ. ದಿನದಿಂದ ದಿನಕ್ಕೆ ಸಾಯುತ್ತಿರುವ ದನಗಳಿಗೆ ಹೊಣೆ ಯಾರು ಎಂಬಂತೆ ಗೋಮಾತೆ ದೇವರಿಗೆ ಸಮಾನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆಗೆ ದನಗಳನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಹೋರಾಟ ಮಾಡುವುದಾಗಿ ಯುವ ಮುಖಂಡ ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು