11:14 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ: ಕಾರಣ ಏನು?

28/09/2021, 16:09

ತುಮಕೂರು(reporterkarnataka.com)
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗಿರಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭೆ ಚುನಾವಣೆ ಜತೆಗೆ, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಎದುರಾಯಿತು ಎಂದು ವಿವರಣೆ ನೀಡಿದ್ದಾರೆ.

ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಬಾರಿ ತುಮಕೂರು ಜಿಲ್ಲಾ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣ ಎಂದು ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಆಗಿರುವ ಸುರೇಶ್ ಗೌಡ ಅವರ ರಾಜೀನಾಮೆ ಹಲವು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು