5:17 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ: ಕಾರಣ ಏನು?

28/09/2021, 16:09

ತುಮಕೂರು(reporterkarnataka.com)
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗಿರಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭೆ ಚುನಾವಣೆ ಜತೆಗೆ, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಎದುರಾಯಿತು ಎಂದು ವಿವರಣೆ ನೀಡಿದ್ದಾರೆ.

ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಬಾರಿ ತುಮಕೂರು ಜಿಲ್ಲಾ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣ ಎಂದು ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಆಗಿರುವ ಸುರೇಶ್ ಗೌಡ ಅವರ ರಾಜೀನಾಮೆ ಹಲವು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು