8:35 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು