8:20 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು