12:52 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೋಲಾರ ನಗರಸಭೆ ನೂತನ ಕಟ್ಟಡ: ಕೆಲವು ಬದಲಾವಣೆಗೆ ಸಲಹೆ; ಕರಡು ವಿನ್ಯಾಸ ನಕ್ಷೆಗೆ ಅನುಮೋದನೆ

29/09/2021, 10:52

ಶಬ್ಬೀರ್ ಅಹಮ್ಮದ್ ‌ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣದ ಕರಡು ವಿನ್ಯಾಸ ನಕ್ಷೆಗೆ ಹಲವು ಬದಲಾವಣೆಗಳನ್ನು ಮಾಡಲು ನಗರಸಭೆ ಸದಸ್ಯರು ಸೂಚಿಸಿ ಹಲವಾರು ಸಲಹೆಗಳನ್ನು ನೀಡುವ ಮೂಲಕ ಅನುಮೋದನೆ ನೀಡಿದರು.

ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಶ್ವೇತಾ.ಆರ್.ಶಬರೀಶ್  ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶೇಷ ಚರ್ಚೆ ಆದ ನಂತರ ತಾಲ್ಲೂಕು ಕಚೇರಿ ಪಕ್ಕದಲ್ಲಿರುವ ನಗರ ಸಭೆ ಆಸ್ತಿಯಲ್ಲಿ 133×125 ಅಡಿಗಳ ಅಳತೆಯ ಮೂರು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು 10 ಕೋಟಿ ರೂಗಳ ವೆಚ್ಚದಲ್ಲಿ ಕಟ್ಟಲು ಸಭೆ ಅನುಮೋದನೆ ನೀಡಿತು.

ನೂತನ ಕಟ್ಟಡದಲ್ಲಿ ಬ್ಯಾಂಕ್, ಎ.ಟಿ.ಎಂ, ಕ್ಯಾಂಟೀನ್ ಹಾಗೂ ಲೈಬ್ರೆರಿ ಹಾಗೂ ಮುಂದಿನ ದಿನಗಳಲ್ಲಿ ನಗರಸಭೆ ಮೇಲ್ದರ್ಜೆಗೆ ಹೋಗುವುದರಿಂದ ನೂರು ಆಸನಗಳ ಸುಸಜ್ಜಿತ ಮೀಟಿಂಗ್ ಹಾಲ್ ಮಾಡಲು ಸದಸ್ಯರು ಸಲಹೆಗಳನ್ನು  ನೀಡಿದರು.


ನಗರಸಭೆ ವ್ಯಾಪ್ತಿಯಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ದೃಷ್ಟಿಯಿಂದ ಆಸ್ತಿ ತೆರಿಗೆ ವಸೂಲಾತಿಯನ್ನು ಉನ್ನತೀಕರಿಸಲು ಬೆಂಗಳೂರಿನ ಸೆಮಿನಲ್ ಸಾಪ್ಟ್ ವೇರ್ ಪ್ರೈವೇಟ್ ಲಿ ರವರಿಂದ ಆಸ್ತಿಗಳ ಸರ್ವೆ ಮಾಡಿಸಿ ಗಣಕೀಕರಣಗೊಳಿಸಲು ಸಭೆ ಅನುಮೋದನೆ ನೀಡಿತು.

ನಗರದ ಬೆಸ್ಕಾಂ ರಸ್ತೆ ವೃತ್ತದಲ್ಲಿ (ಎಸಿಬಿ ಕಚೇರಿ ಮುಂಭಾಗ) ಸಿ.ಎಸ್.ಆರ್. ಅಥವಾ ದಾನಿಗಳ ನೆರವಿನಿಂದ ಅಶೋಕ ಪಿಲ್ಲರ್ ಮಾದರಿಯಲ್ಲಿ ನಿರ್ಮಿಸಿ ಅಭಿವೃದ್ಧಿಪಡಿಸಲು ಸಭೆ ತೀರ್ಮಾನ ಕೈಗೊಂಡಿತು.

ಅಧ್ಯಕ್ಷರ ಅಪ್ಪಣೆ ಮೇರೆಗೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ ಮುಬಾರಕ್ ಮಾತನಾಡಿ, ನಗರದಲ್ಲಿ ರಸ್ತೆಗಳು ಹಾಳಾಗಿದ್ದು ಟೆಂಡರ್ ಮುಗಿದ್ದರೂ ಕಾಮಗಾರಿ ಮಗಿಯದೇ ಓಡಾಡಲು ತುಂಬಾ ಕಷ್ಟವಾಗುತ್ತಾ ಇದೆ, ಇದಕ್ಕೆ  ಪಿ.ಡಬ್ಲ್ಯೂ ಇಲಾಖೆ ಬೇಜವಾಬ್ದಾರಿಯೇ ಕಾರಣ,ಇಲಾಖೆಗೆ ಪತ್ರಬರೆಯುವುದಲ್ಲದೆ ಟೆಂಡರುದಾರನಿಗೆ ನೋಟೀಸ್ ಕೊಡಬೇಕು ಎಂದಾಗ ಇದಕ್ಕೆ ಧ್ವನಿ ಗೂಡಿಸಿದ ಮಾಜಿ ಅಧ್ಯಕ್ಷೆ ನಾಜಿಯಾ ಹಾಗೂ ಅಂಬರೀಶ್ ಮತ್ತು ಇತರೆ ಸದಸ್ಯರು ಸಭೆಯಲ್ಲಿ ಹಾಜರಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುಸ್ತಾಕ್ ರನ್ನು ತರಾಟೆಗೆ ತೆಗೆದು ಕೊಂಡರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುಸ್ತಾಕ್ ಮಾತನಾಡಿ, ಆದಷ್ಟೂ ಬೇಗ ಗುತ್ತಿಗೆ ದಾರರ ಮೂಲಕ ರಸ್ತೆಗಳ ಕಾಮಗಾರಿ ಕೆಲಸ ಪ್ರಾರಂಭ ಮಾಡುವುದಾಗಿ ಸಭೆಗೆ ತಿಳಿಸಿದರು.

ಸದಸ್ಯ ಅಂಬರೀಶ್ ಮಾತನಾಡಿ, ಕೋಡಿ ಕಣ್ಣೂರು ಕೆರೆ ಬಿರುಕು ಬಿಟ್ಟಿದ್ದು ನೀರು ಸೋರಿಕೆ ಯಿಂದ ಮನೆಗಳಿಗೆ ನೀರು ಹರಿಯುತ್ತಿದ್ದು, ಲೀಕೇಜ್ ತಡೆಯಲು ಕಟ್ಟೆಗೆ ರಿವಿಟ್ಮೆಂಟ್ ಮಾಡಬೇಕು, ಕೋಲಾರಮ್ಮ ಕರೆಯಲ್ಲಿ ಬೆಳದಿರುವ ಜೊಂಡು ತೆಗೆಸಲು ಕ್ರಮ ಕೈಗೊಳ್ಳಲು ವಿನಂತಿಸಿದರು.

ಕೋಲಾರಮ್ಮ ಕೆರೆ ಕೋಡಿ ಹರಿಯುತ್ತಿದ್ದು,ಅಧ್ಯಕ್ಷರು, ಉಪಾಧ್ಯಕ್ಷರು,ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಒಟ್ಟಿಗೆ ಸೇರಿ ಬಾಗೀನ ನೀಡಲು ದಿನಾಂಕ ನಿಗಧಿಪಡಿಸುವಂತೆ ಹಾಗೂ ಕೆಂದಟ್ಟಿ ಬಳಿ ಬುಧವಾರ ಕಸ ವಿಲೇವಾರಿ ಘಟಕದ ಕಾಂಪೌಂಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ಸಭೆ ಒಮ್ಮತದಿಂದ  ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಗೌಡ,ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಆಯುಕ್ತ  ಪ್ರಸಾದ್ , ಕಂದಾಯ ಅಧಿಕಾರಿ, ಚಂದ್ರು, ತ್ಯಾಗರಾಜ್ ಹಾಗೂ ನಗರಸಭೆ ಸಿಬ್ಬಂದಿ, ಸದಸ್ಯರು, ನಾಮನಿರ್ದೇಶನ ಸದಸ್ಯರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು