6:47 PM Sunday1 - February 2026
ಬ್ರೇಕಿಂಗ್ ನ್ಯೂಸ್
ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಇತ್ತೀಚಿನ ಸುದ್ದಿ

ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ 

26/05/2021, 07:06

ಅಥಣಿ(reporterkarnataka news): ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸಾಕಷ್ಟು ರೆಮೆಡಿಸಿವರ್ ಚುಚ್ಚುಮದ್ದು ಲಭ್ಯವಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಯಾವುದೇ ಸಾಕ್ಷ್ಮಾಧಾರ ದೊರಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಕೊರೊನಾ ರೋಗಿಗಳ ಸಂಬಂಧಿಕರಿಗೆ ಊಟ ಕೊಡುವ ನೆಪದಲ್ಲಿ ಆಸ್ಪತ್ರೆಯೊಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಅವರು ಊಟ ಕೊಡಲು ಆಸ್ಪತ್ರೆಯೊಳಗೆ ಹೋದರೆ ಸೋಂಕು ಅವರ ಜತೆ ಮನೆ ಮಂದಿಗೆ ಹರಡುವ ಸಾಧ್ಯತೆಯಿದೆ. ಊಟವನ್ನು ಆಸ್ಪತ್ರೆಯ ಹೊರಭಾಗದಲ್ಲಿರುವ ಆಸ್ಪತ್ರೆ ಸಿಬ್ಬಂದಿಗಳಿಗೆ ಒಪ್ಪಿಸಬೇಕು. ಅವರು ರೋಗಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು