11:22 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ

30/09/2021, 08:27

ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು. 

ಚಟುವಟಿಕೆಗಳ ವಿವರ ಇಂತಿದೆ:

ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ, ಫೋಟೋಗ್ರಾಫರ್, ಸಿ.ಡಿ, ಖರ್ಚು ವೆಚ್ಚ, ಪತ್ರಿಕಾ ಪ್ರಕಟಣೆಗಳ ಮಾಹಿತಿಗಳ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಮಂಗಳೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು