2:24 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಲೇಖಕಿ, ಕವಯತ್ರಿ ಅಕ್ಷತಾರಾಜ್ ಪೆರ್ಲ ಅವರ “ಬೇಲಿ ಹಾಗೂ ಸಾಪೊದ ಕಣ್ಣ್” ತುಳು ನಾಟಕ ಕೃತಿ ಲೋಕಾರ್ಪಣೆ

30/09/2021, 23:04

ಮಂಗಳೂರು(ReporterKarnataka.com) : ಲೇಖಕಿ, ಕವಯತ್ರಿ, ಆಕಾಶವಾಣಿ ಉದ್ಘೋಶಕರಾದ ಅಕ್ಷತಾ ರಾಜ್ ಪೆರ್ಲ ಅವರ ಪ್ರಶಸ್ತಿ ವಿಜೇತ ‘ಬೇಲಿ’ ಹಾಗೂ ‘ಸಾಪೊದ ಕಣ್’ ನಾಟಕ ಕೃತಿಗಳನ್ನು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಲೋಕಾರ್ಪಣೆಗೊಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಮಂಗಳೂರು ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಗುರುವಾರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಸಂದರ್ಭ ಮಾತಾಡಿದ ಕುಲಪತಿಗಳು, ಸಾಹಿತ್ಯ ಬೆಳೆದಂತೆ ಭಾಷೆ ಬೆಳೆಯುತ್ತದೆ. ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ರಚನೆಯಾಗಬೇಕು, ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆಯ ಬಳಕೆಯಾಗುತ್ತಿದೆ ಆದರೆ ಭಾಷೆಯ ದಾಖಲಾತಿಗೆ ಕೃತಿಗಳ ರಚನೆಯಾಗಬೇಕು ಎಂದ ಅವರು ನಾಟಕಗಳಲ್ಲಿ ಮಾನವೀಯತೆಗೆ ಒತ್ತು ನೀಡಿರುವುದು ಹಾಗೂ ಎರಡು ತುಳು ನಾಟಕಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆಗೊಳಿಸಿದ ಲೇಖಕಿಯನ್ನು ಶ್ಲಾಘಿಸಿದರು.

ಮಂಗಳೂರು ವಿ.ವಿ ಯ ಬ್ರಹ್ಮಶ್ರೀ ನಾರಾಯಣಗುರು ಪೀಠದ ಸಂಯೋಜಕ ಡಾ.ಗಣೇಶ್ ಅಮೀನ್ ಸಂಕಮಾರ್, ಸೂಕ್ಷ್ಮವಾಗಿ ಲೋಕ ತಿದ್ದುವ ಶಕ್ತಿ ನಾಟಕಗಳಿಗಿದೆ, “ಪುರಾಣದ ಪಾತ್ರಗಳನ್ನು ಈಗಿನ ಸಾಮಾಜಿಕ ಪರಿಸ್ಥಿತಿಗೆ ಅನ್ವಯಿಸುವುದು ಸುಲಭದ ಮಾತಲ್ಲ. ಅದರಲ್ಲೂ ಸಾಹಿತಿಗಳು ನಿರ್ಲಕ್ಷಿಸಿರುವ ಶಿಖಂಡಿ ಪಾತ್ರವನ್ನು ಲೇಖಕಿ ಆರಿಸಿಕೊಂಡು ಅದನ್ನು ಬೆಳೆಸಿರುವುದು ಅದ್ಭುತ, ಮಂಗಳಮುಖಿಯರು ಲೋಕಕ್ಕೆ ಮಂಗಳ ತರುವವರು ಎಂಬುದನ್ನು ಲೇಖಕಿ ನಿರೂಪಿಸಿದ್ದಾರೆ ಎಂದು ಅವರು ತಿಳಿಸಿದರು.

ಕೃತಿಯನ್ನು ಪರಿಚಯಿಸಿದ ನ್ಯಾಯವಾದಿ ಹಾಗೂ ರಂಗನಿರ್ದೇಶಕ ಶಶಿರಾಜ್ ಕಾವೂರು, ಬೇಲಿ ಹಾಗೂ ಸಾಪೊದ ಕಣ್ಣ್ ನಾಟಕಗಳಲ್ಲಿ ನಾಟಕಕಾರನಿಗೆ ಇರಲೇಬೇಕಾದ ವಿವೇಚನಾಶಕ್ತಿ ಮತ್ತು ತರ್ಕವಿದೆ. ಸಣ್ಣ, ಚುರುಕಾದ, ಪರಿಣಾಮಕಾರಿ ನಿರೂಪಣೆ, ಜೊತೆಗೆ ಸಂಭಾಷಣೆಯಲ್ಲಿ ನಿರಂತರತೆಯಿದೆ. ಈ ನಾಟಕಗಳು ಆದಷ್ಟು ಬೇಗ ಬೇರೆ ಭಾಷೆಗೆ ತರ್ಜುಮೆಯಾದರೆ, ರಂಗ ಪ್ರಯೋಗವಾದರೆ ಒಳ್ಳೆಯದು, ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಲೇಖಕಿ ಅಕ್ಷತಾ‌ರಾಜ್ ಪೆರ್ಲ ಅವರನ್ನು ಅಭಿನಂದಿಸಿದರು. ಎಂ.ಆರ್.ಪಿ.ಎಲ್ ಪ್ರಶಿಕ್ಷಣ ವಿಭಾಗದ ಉಪಮಹಾಪ್ರಬಂಧಕಿ ವೀಣಾ.ಟಿ.ಶೆಟ್ಟಿ, ರಾಮಕೃಷ್ಣ ಮಿಷನ್ ನ ‘ಸ್ವಚ್ಛ ಮನಸ್’ ರೂವಾರಿ ರಂಜನ್ ಬೆಳ್ಳರ್ಪಾಡಿ ಮತ್ತಿತರರು ಉಪಸ್ಥಿತರಿದ್ದರು. ತುಳುಪೀಠದ ಸಂಯೋಜಕ ಡಾ. ಮಾಧವ ಎಂ ಕೆ ಅತಿಥಿಗಳನ್ನು ಸ್ವಾಗತಿಸಿದರು. ಗೀತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು