3:45 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಲೇಖಕಿ, ಕವಯತ್ರಿ ಅಕ್ಷತಾರಾಜ್ ಪೆರ್ಲ ಅವರ “ಬೇಲಿ ಹಾಗೂ ಸಾಪೊದ ಕಣ್ಣ್” ತುಳು ನಾಟಕ ಕೃತಿ ಲೋಕಾರ್ಪಣೆ

30/09/2021, 23:04

ಮಂಗಳೂರು(ReporterKarnataka.com) : ಲೇಖಕಿ, ಕವಯತ್ರಿ, ಆಕಾಶವಾಣಿ ಉದ್ಘೋಶಕರಾದ ಅಕ್ಷತಾ ರಾಜ್ ಪೆರ್ಲ ಅವರ ಪ್ರಶಸ್ತಿ ವಿಜೇತ ‘ಬೇಲಿ’ ಹಾಗೂ ‘ಸಾಪೊದ ಕಣ್’ ನಾಟಕ ಕೃತಿಗಳನ್ನು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಲೋಕಾರ್ಪಣೆಗೊಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಮಂಗಳೂರು ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಗುರುವಾರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಸಂದರ್ಭ ಮಾತಾಡಿದ ಕುಲಪತಿಗಳು, ಸಾಹಿತ್ಯ ಬೆಳೆದಂತೆ ಭಾಷೆ ಬೆಳೆಯುತ್ತದೆ. ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ರಚನೆಯಾಗಬೇಕು, ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆಯ ಬಳಕೆಯಾಗುತ್ತಿದೆ ಆದರೆ ಭಾಷೆಯ ದಾಖಲಾತಿಗೆ ಕೃತಿಗಳ ರಚನೆಯಾಗಬೇಕು ಎಂದ ಅವರು ನಾಟಕಗಳಲ್ಲಿ ಮಾನವೀಯತೆಗೆ ಒತ್ತು ನೀಡಿರುವುದು ಹಾಗೂ ಎರಡು ತುಳು ನಾಟಕಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆಗೊಳಿಸಿದ ಲೇಖಕಿಯನ್ನು ಶ್ಲಾಘಿಸಿದರು.

ಮಂಗಳೂರು ವಿ.ವಿ ಯ ಬ್ರಹ್ಮಶ್ರೀ ನಾರಾಯಣಗುರು ಪೀಠದ ಸಂಯೋಜಕ ಡಾ.ಗಣೇಶ್ ಅಮೀನ್ ಸಂಕಮಾರ್, ಸೂಕ್ಷ್ಮವಾಗಿ ಲೋಕ ತಿದ್ದುವ ಶಕ್ತಿ ನಾಟಕಗಳಿಗಿದೆ, “ಪುರಾಣದ ಪಾತ್ರಗಳನ್ನು ಈಗಿನ ಸಾಮಾಜಿಕ ಪರಿಸ್ಥಿತಿಗೆ ಅನ್ವಯಿಸುವುದು ಸುಲಭದ ಮಾತಲ್ಲ. ಅದರಲ್ಲೂ ಸಾಹಿತಿಗಳು ನಿರ್ಲಕ್ಷಿಸಿರುವ ಶಿಖಂಡಿ ಪಾತ್ರವನ್ನು ಲೇಖಕಿ ಆರಿಸಿಕೊಂಡು ಅದನ್ನು ಬೆಳೆಸಿರುವುದು ಅದ್ಭುತ, ಮಂಗಳಮುಖಿಯರು ಲೋಕಕ್ಕೆ ಮಂಗಳ ತರುವವರು ಎಂಬುದನ್ನು ಲೇಖಕಿ ನಿರೂಪಿಸಿದ್ದಾರೆ ಎಂದು ಅವರು ತಿಳಿಸಿದರು.

ಕೃತಿಯನ್ನು ಪರಿಚಯಿಸಿದ ನ್ಯಾಯವಾದಿ ಹಾಗೂ ರಂಗನಿರ್ದೇಶಕ ಶಶಿರಾಜ್ ಕಾವೂರು, ಬೇಲಿ ಹಾಗೂ ಸಾಪೊದ ಕಣ್ಣ್ ನಾಟಕಗಳಲ್ಲಿ ನಾಟಕಕಾರನಿಗೆ ಇರಲೇಬೇಕಾದ ವಿವೇಚನಾಶಕ್ತಿ ಮತ್ತು ತರ್ಕವಿದೆ. ಸಣ್ಣ, ಚುರುಕಾದ, ಪರಿಣಾಮಕಾರಿ ನಿರೂಪಣೆ, ಜೊತೆಗೆ ಸಂಭಾಷಣೆಯಲ್ಲಿ ನಿರಂತರತೆಯಿದೆ. ಈ ನಾಟಕಗಳು ಆದಷ್ಟು ಬೇಗ ಬೇರೆ ಭಾಷೆಗೆ ತರ್ಜುಮೆಯಾದರೆ, ರಂಗ ಪ್ರಯೋಗವಾದರೆ ಒಳ್ಳೆಯದು, ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಲೇಖಕಿ ಅಕ್ಷತಾ‌ರಾಜ್ ಪೆರ್ಲ ಅವರನ್ನು ಅಭಿನಂದಿಸಿದರು. ಎಂ.ಆರ್.ಪಿ.ಎಲ್ ಪ್ರಶಿಕ್ಷಣ ವಿಭಾಗದ ಉಪಮಹಾಪ್ರಬಂಧಕಿ ವೀಣಾ.ಟಿ.ಶೆಟ್ಟಿ, ರಾಮಕೃಷ್ಣ ಮಿಷನ್ ನ ‘ಸ್ವಚ್ಛ ಮನಸ್’ ರೂವಾರಿ ರಂಜನ್ ಬೆಳ್ಳರ್ಪಾಡಿ ಮತ್ತಿತರರು ಉಪಸ್ಥಿತರಿದ್ದರು. ತುಳುಪೀಠದ ಸಂಯೋಜಕ ಡಾ. ಮಾಧವ ಎಂ ಕೆ ಅತಿಥಿಗಳನ್ನು ಸ್ವಾಗತಿಸಿದರು. ಗೀತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು